Google News-KN | Google News-EN | Telegram |
ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಹೊರತುಪಡಿಸಿ 8 ಪ್ರತಿಪಕ್ಷಗಳು ಪ್ರಧಾನಿ ಮೋದಿಗೆ ಪತ್ರ ಬರೆದಿವೆ.
ಆಮ್ ಆದ್ಮಿ ಪಕ್ಷದ ಮನೀಷ್ ಸಿಸೊಡಿಯಾ ಅವರನ್ನು ಸಿಬಿಐ ಬಂಧಿಸಿರುವ ಬೆನ್ನಲ್ಲೇ ಪ್ರತಿಪಕ್ಷಗಳು ಒಗ್ಗಟ್ಟಾಗಿದ್ದು, ಪ್ರಧಾನಿಗೆ ಪತ್ರ ಬರೆದು ತನಿಖಾ ಸಂಸ್ಥೆಗಳ ದುರುಪಯೋಗ ತಡೆಗಟ್ಟಲು ಒತ್ತಾಯಿಸಿವೆ.
ಕಾಂಗ್ರೆಸ್ ಈ ಪತ್ರದಲ್ಲಿ ಸಹಿ ಹಾಕಿಲ್ಲ. ಉಳಿದಂತೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಪತ್ರಕ್ಕೆ ಸಹಿ ಹಾಕಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.