Google News-KN | Google News-EN | Telegram |
ವಸತಿ ಸಚಿವ ವಿ. ಸೋಮಣ್ಣ ಸದ್ಯ ಪಕ್ಷದ ಕಾರ್ಯ ಚಟುವಟಿಕೆಗಳಿಂದ ಹಿಂದೆ ಉಳಿದಿದ್ದಾರೆ. ಪಕ್ಷದ ವಿರುದ್ಧ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕೆಲವೇ ದಿನಗಳಲ್ಲಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವಂದತಿಗಳು ಎದ್ದಿವೆ. ಈ ಹಿನ್ನೆಲೆ ರಾಜ್ಯ ನಾಯಕರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಸಮಾಧಾನ ಶಮನಕ್ಕಾಗಿ ಸಭೆ ಮಾಡಿದ್ದರೂ, ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ.
ಇದೀಗ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೊಕ್ ನೀಡಲಾಗಿದೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಷೇತ್ರದ ಜನರು ನನ್ನನ್ನು ಮನೆ ಮಗನಾಗಿ ನೋಡಿಕೊಂಡಿದ್ದಾರೆ.
ನಾನು ಯಾರ ಬಗ್ಗೆಯೂ ಮಾತನಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ಜತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ನನಗೆ ಈಗ 72 ವರ್ಷ, ಆಗಬೇಕಿರುವುದು ಏನೂ ಇಲ್ಲ. ಆದರೆ ಸೋಮಣ್ಣ ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ.
ನನಗೀಗ 72 ವರ್ಷ. ಯಾರಿಂದಲೂ ನನಗೆ ಏನೂ ಆಗಬೇಕಿಲ್ಲ. ನನ್ನ ಕ್ಷೇತ್ರದ ಜನರು ನನ್ನನ್ನು ಮಗನಂತೆ ಭಾವಿಸಿದ್ದಾರೆ. ನನ್ನ ಹೊಟ್ಟೆಪಾಡು ನೋಡಿಕೊಳ್ಳಬೇಕಲ್ಲ ಎಂದು ಸೋಮಣ್ಣ ಮಾರ್ಮಿಕವಾಗಿ ನುಡಿದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.