Google News-KN | Google News-EN | Telegram |
ನೇಪಾಳ ಮೂಲದ ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ನಿಮ್ಮ ಮನೆಯನ್ನೇ ದೋಚಬಹುದು.
ಬೆಂಗಳೂರಿನ ದಕ್ಷಿಣ ವಿಭಾಗದ ಎರಡು ಠಾಣಾ ವ್ಯಾಪ್ತಿಯ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 23 ನೇಪಾಳಿಗಳು ಅರೆಸ್ಟ್ ಆಗಿದ್ದಾರೆ.
2 ಕೋಟಿ ಮೌಲ್ಯದ ಚಿನ್ನಾಭರಣ, ನಗದು, ಪಿಸ್ತೂಲ್, ವಿದೇಶಿ ಕರೆನ್ಸಿ ದೋಚಿದ್ದವರ ಬಂಧನವಾಗಿದೆ. ನೇಪಾಳ ಮೂಲದ ಎಂಟು ಆರೋಪಿಗಳನ್ನ ಜೆ.ಪಿ.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನೇತ್ರಾ ಶಾಹಿ, ಲಕ್ಷ್ಮಿ ಸೇಜುವಲ್, ಗೋರಕ್ ಬಹದ್ದೂರ್, ಭೀಮ್ ಬಹದ್ದೂರ್, ಅಂಜಲಿ & ಅಬೇಶ್ ಶಾಹಿ, ಪ್ರಶಾಂತ್, ಪ್ರಕಾಶ್ ಬಂಧಿತ ಆರೋಪಿಗಳು.
ಕಿರಣ್ ಎಂಬಾತನ ಮನೆಯಲ್ಲಿ ಕೆಲಸಕ್ಕಿದ್ದ ಪ್ರೇಮ್ ಹಾಗೂ ಲಕ್ಷ್ಮಿ ಸೆಜುವಲ್ ಎಂಬ ಆರೋಪಿಗಳು ಕಿರಣ್ ಪೋಷಕರು ತಿರುಪತಿಗೆ ತೆರಳಿದ್ದಾಗ ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಮನೆಯಲ್ಲಿ ಕೃತ್ಯ ಎಸಗಿದ್ದರು.
ಬಳಿಕ ಕಿರಣ್ ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೆ.ಜಿ 173 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 77.69 ಲಕ್ಷ ನಗದು, ಪಿಸ್ತೂಲ್, 3 ಜೀವಂತ ಗುಂಡುಗಳು ವಶಕ್ಕೆ ಪಡೆಯಲಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.