Google News-KN | Google News-EN | Telegram |
ಮೈಸೂರಿನ ಕುಶಾಲನಗರ ಸಮೀಪದ ಹೆಬ್ಬಾಲೆಯ ಹೊಸಕೋಟೆ ಗ್ರಾಮದಲ್ಲಿ ಪ್ರೇಮಿಸಿ ಮದುವೆಯಾದ ಮೂರೇ ದಿನಕ್ಕೆ ಪತಿ ಮಡದಿಯನ್ನು ಹತ್ಯೆ ಮಾಡಿದ್ದಾನೆ.
ಪ್ರೀತಿಸುವಾಗ, ಮದುವೆಯಾದಾಗ ಬಾರದ ಜಾತಿ ಮದುವೆಯಾದ ನಂತರ ಅಡ್ಡಿಯಾಗಿ ಒಂದು ಜೀವವನ್ನೇ ಬಲಿ ಪಡೆದಿದೆ.
ಹೊಸಕೋಟೆಯ ದಶರಥ, ಗಿರಿಜಾ ಎಂಬುವವರ ಪುತ್ರ ಹೇಮಂತ್ ಅಕ್ಷಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಲಿತ ಜನಾಂಗಕ್ಕೆ ಸೇರಿದ್ದಾಳೆ ಅನ್ನೋ ಒಂದೇ ಕಾರಣಕ್ಕೆ ಯುವಕ ಮತ್ತು ಪೋಷಕರು ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಕ್ಷಿತಾಳ ಸಾವಿಗೆ ಕಾರಣರಾದವರನ್ನು ಬಂಧಿಸಬೇಕೆಂದು ಮೃತಳ ಸಂಬಂಧಿಕರು ಬಂಧನಕ್ಕೆ ಆಗ್ರಹಿಸಿದ್ದಾರೆ.. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯನ್ನು ದೂರು ದಾಖಲಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.