Google News-KN | Google News-EN | Telegram |
ಬಿಜೆಪಿ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬೀದಿಗೆ ಬಂದಿದೆ. ಇದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮ ರದ್ದುಗೊಳಿಸಬೇಕಾದ ಪ್ರಸಂಗ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಗುರುವಾರ ನಡೆದಿದೆ.
ಬಿಎಸ್ ಯಡಿಯೂರಪ್ಪ ಅವರ ಪುತ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಕಿಚನ್ ಪಾಲಿಟಿಕ್ಸ್ ಇಲ್ಲ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಹೇಳಿಕೆಗೆ ಅಕ್ರೋಶಗೊಂಡಿರುವ ಯಡಿಯೂರಪ್ಪ ಬೆಂಬಲಿಗರು, ಬಿಜೆಪಿ ಪರ ಪ್ರಚಾರ ಮಾಡದಂತೆ ಬಿಎಸ್ ಯಡಿಯೂರಪ್ಪ ಅವರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಇದರಿಂದ ಮುಜುಗರಕ್ಕೆ ಒಳಗಾದ ಯಡಿಯೂರಪ್ಪ ಕಾರ್ಯಕ್ರಮ ರದ್ದುಗೊಳಿಸಿ ಮರಳಿದರು.
ಮೂಡಿಗೆರೆಯಿಂದ ಸ್ಪರ್ಧಿಸಲಿರುವ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದರು. ಬಾಯಿಗೆ ಬಂದಂತೆ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತರುತ್ತಿರುವ ಅವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಇದೇ ವೇಳೆ ಒತ್ತಾಯಿಸಿದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.