ಮಗು ಯಾರಿಗೆ ಸೇರಬೇಕು? ಹೆತ್ತವರಿಗೋ? ಜ್ಯೋತಿಷಿಗೋ? ಸುಮಲತಾ ತಿರುಗೇಟು | Azad Times

2 weeks ago 2
Google News-KN Google News-EN Telegram Facebook

Azad Times News Desk.

ತಂದೆ-ತಾಯಿಗೆ ಜ್ಯೋತಿಷಿ ಹೇಳಿದ ರೀತಿ ಮಗು ಆಯಿತಂತೆ. ಈಗ ಕ್ರೆಡಿಟ್​​ ಜ್ಯೋತಿಷಿಗೆ ಹೋಗಬೇಕಾ? ಅಥವಾ ಆ ತಂದೆ-ತಾಯಿಗೆ ಹೋಗಬೇಕಾ? ಎಂದು ವ್ಯಂಗ್ಯವಾಗಿ ಕಾಂಗ್ರೆಸ್ ಮತ್ತು JDSಗೆ ಸುಮಲತಾ ಮಾತಿನ ಚಾಟಿ ಬೀಸಿದ್ದಾರೆ.

ಮಂಡ್ಯದಲ್ಲಿ ದಶಪಥ ರಸ್ತೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ರೀತಿ ಕ್ರೆಡಿಟ್ ತೆಗೆದುಕೊಳ್ಳಲು ತುಂಬಾ ಜನ ಇರ್ತಾರೆ. ಈ ವಿಚಾರದಲ್ಲಿ ಕ್ರೆಡಿಟ್​ ತೆಗೆದುಕೊಳ್ಳಲು ಸಾಧ್ಯವಿಲ್ಲ. ಜನರಿಗೆ ಚೆನ್ನಾಗಿ ಗೊತ್ತಿದೆ ಯಾರಿಗೆ ಕ್ರೆಡಿಟ್​​​ ಕೊಡಬೇಕು ಅಂತ ಎಂದು ತಿರುಗೇಟು ನೀಡಿದ್ರು.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೈಸೂರು-ಬೆಂಗಳೂರು ರಸ್ತೆ ನಿರ್ಮಾಣ ವಿಚಾರದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ನಡೆಯುತ್ತಿದೆ. ರಸ್ತೆಯನ್ನು ನಾವು ಮಾಡಿಸಿದ್ದು ಅಂತ BJP, ಕಾಂಗ್ರೆಸ್ ಮತ್ತು JDS ಹೇಳಿಕೊಳ್ಳುತ್ತಿವೆ. ಅಲ್ಲದೆ, ಈ ವಿಚಾರದಲ್ಲಿ ರಾಜಕೀಯ ನಾಯಕರ ವಾಗ್ವಾದದ ಜೊತೆಗೆ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.

ಇದೀಗ ಈ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದು, ರಸ್ತೆ ನಿರ್ಮಾಣ ವಿಚಾರದಲ್ಲಿ ಕ್ರೆಡಿಟ್ ಪಡೆದುಕೊಳ್ಳಲು ಮುಂದಾದ ಕಾಂಗ್ರೆಸ್, JDSಗೆ ಜ್ಯೋತಿಷಿ ಕತೆ ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿಂದು ಮಾತನಾಡಿದ ಸುಮಲತಾ, ಜ್ಯೋತಿಷಿ ಒಬ್ಬರಿಗೆ ನಿಮಗೆ ಮಗು ಆಗುತ್ತೆ ಅಂತ ಕನಸು ಬಿತ್ತಂತೆ.

ಅದೇ ರೀತಿ ತಂದೆ-ತಾಯಿಗೆ ಜ್ಯೋತಿಷಿ ಹೇಳಿದ ರೀತಿ ಮಗು ಆಯಿತಂತೆ. ಈಗ ಕ್ರೆಡಿಟ್​​ ಜ್ಯೋತಿಷಿಗೆ ಹೋಗಬೇಕಾ? ಅಥವಾ ಆ ತಂದೆ-ತಾಯಿಗೆ ಹೋಗಬೇಕಾ? ಎಂದು ವ್ಯಂಗ್ಯವಾಗಿ ಕಾಂಗ್ರೆಸ್ ಮತ್ತು JDSಗೆ ಸುಮಲತಾ ಮಾತಿನ ಚಾಟಿ ಬೀಸಿದ್ದಾರೆ. ಮುಂದುವರಿದು ಮಾತನಾಡಿದ ಸುಮಲತಾ, ಈ ರೀತಿ ಕ್ರೆಡಿಟ್ ತೆಗೆದುಕೊಳ್ಳಲು ತುಂಬಾ ಜನ ಇರ್ತಾರೆ. ಈ ವಿಚಾರದಲ್ಲಿ ಕ್ರೆಡಿಟ್​ ತೆಗೆದುಕೊಳ್ಳಲು ಸಾಧ್ಯವಿಲ್ಲ. ಜನರಿಗೆ ಚೆನ್ನಾಗಿ ಗೊತ್ತಿದೆ ಯಾರಿಗೆ ಕ್ರೆಡಿಟ್​​​ ಕೊಡಬೇಕು ಅಂತ ಎಂದು ತಿರುಗೇಟು ನೀಡಿದ್ರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page