Google News-KN | Google News-EN | Telegram |
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಾಳೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದು, ನಾಳೆ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಮಂಡ್ಯ ಸಂಸದ ಸುಮಲತಾ ಅಂಬರೀಷ್ ಬಿಜೆಪಿ ಸೇರಲಿದ್ದಾರೆ. ಮೋದಿ ಜೊತೆ ವೇದಿಕೆಯಲ್ಲಿ ಸೇರ್ಪಡೆಗೆ ಬಯಸಿದ್ದರು. ಆದರೆ ಸರಕಾರಿ ಕಾರ್ಯಕ್ರಮ ಆಗಿದ್ದರಿಂದ ಆಗಿರಲಿಲ್ಲ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಹೇಳಿದ್ದರು.
ಪುಟ್ಟರಾಜು ಹೇಳಿಕೆ ಬೆನ್ನಲ್ಲೇ ಸುಮಲತಾ ನಾಳೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ನಾಳೆ ಬಿಜೆಪಿ ಸೇರ್ಪಡೆ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಸುಮಲತಾ ಬಿಜೆಪಿ ಸೇರ್ಪಡೆ ಕುರಿತು ಬೆಂಬಲಿಗರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಮಂಡ್ಯ ಅಥವಾ ಮದ್ದೂರಿನಿಂದ ವಿಧಾನಸಬೆಗೆ ಕಣಕ್ಕಿಳಿಯುವ ಸಾಧ್ಯತೆ ಎಂದು ಹೇಳಲಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.