Google News-KN | Google News-EN | Telegram |
ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರಕಾರ ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವ 6 ರಾಜ್ಯಗಳಿಗೆ ಕೂಡಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಲಸಿಕೆ, ಟ್ರ್ಯಾಕ್, ಟ್ರೀಟಿಂಗ್ ಮತ್ತು ಟೆಸ್ಟ್ ಪ್ರಮಾಣ ಹೆಚ್ಚಿಸುವಂತೆ ಕೇಂದ್ರ ಸೂಚನೆ ಹೊರಡಿಸಿದೆ.
4 ತಿಂಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 700ಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4632ಕ್ಕೆ ಏರಿಕೆಯಾಗಿವೆ. ಕಳೆದ ವರ್ಷ ನವೆಂಬರ್ ನಲ್ಲಿ 734 ಸೋಂಕು ಪ್ರಕರಣಗಳು ಕೊನೆಯ ಬಾರಿಗೆ ಪತ್ತೆಯಾಗಿತ್ತು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.