Google News-KN | Google News-EN | Telegram |
ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಲುಪಿರುವುದರಿಂದ ನಾಯಕ ರೋಹಿತ್ ಶರ್ಮ ಸೇರಿದಂತೆ ಪ್ರಮುಖ ಕ್ರಿಕೆಟಿಗರಿಗೆ ಐಪಿಎಲ್ ಟಿ-20 ಟೂರ್ನಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆದ್ದ ಹಿನ್ನೆಲೆಯಲ್ಲಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಲುಪಿರುವ ಭಾರತ, ಮತ್ತೆ ಆಸ್ಟ್ರೇಲಿಯಾ ತಂಡವನ್ನು ಪ್ರಶಸ್ತಿ ಸುತ್ತಿನಲ್ಲಿ ಎದುರಿಸಲಿದೆ.
ಟೆಸ್ಟ್ ಚಾಂಪಿಯನ್ ಶಿಪ್ ಗೆ ಸಿದ್ಧತೆ ಮಾಡಿಕೊಳ್ಳಬೇಕಿರುವುದರಿಂದ ತರಬೇತಿ ಶಿಬಿರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ನ ಕೆಲವು ಪಂದ್ಯಗಳಿಂದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ರೋಹಿತ್ ಶರ್ಮ ತಿಳಿಸಿದ್ದಾರೆ.
ಐಪಿಎಲ್ ಮುಗಿದ ಬೆನ್ನಲ್ಲೇ ಅಂದರೆ ಜೂನ್ 7ರಂದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಮೇ 29ರಿಂದ ತರಬೇತಿ ಶಿಬಿರ ನಡೆಯಲಿದ್ದು, ಇದರಲ್ಲಿ ಆಟಗಾರರು ಪಾಲ್ಗೊಳ್ಳಲಿದ್ದಾರೆ
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.