Google News-KN | Google News-EN | Telegram |
ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆಗೆ ಪ್ರದಾನಿ ನರೇಂದ್ರ ಮೋದಿ ಆಗಮಿಸಿ, ಭರ್ಜರಿ ಮತಭೇಟೆ ನಡೆಸಿದ್ದು, ಜೆಡಿಎಸ್ ಕಾರ್ಯಕರ್ತರಲ್ಲಿ ನಡುಕ ಹುಟ್ಟಿಸಿದೆ..
ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರು ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆ ಜೆಡಿಎಸ್ ಜನಪ್ರತಿನಿಧಿಗಳ ಜೊತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಭೆ ನಡೆಸಿದ್ದಾರೆ.
ತಮ್ಮ ಭದ್ರಕೋಟೆಯನ್ನ ಉಳಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದು, ಅನಾರೋಗ್ಯದ ಮಧ್ಯೆಯೂ ಮಂಡ್ಯ ಜನಪ್ರತಿನಿಧಿಗಳ ಜೊತೆ ಮೀಟಿಂಗ್ ಮಾಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ನಡೆದಿದ್ದು, ಸಿ.ಎಸ್.ಪುಟ್ಟರಾಜು,D.C. ತಮ್ಮಣ್ಣ, ಶ್ರೀನಿವಾಸ್, ಸುರೇಶ್ಗೌಡ, ಶ್ರೀಕಂಠಯ್ಯ, ಅಪ್ಪಾಜಿ ಗೌಡ, ಅನ್ನದಾನಿಯವರ ಜೊತೆ ಸಮಾಲೋಚನೆ ನಡೆಸಿದ್ದಾರೆ..
ಮಂಡ್ಯ ಜಿಲ್ಲೆಯಲ್ಲಿ ಪಕ್ಷವನ್ನ ಮತ್ತಷ್ಟು ಬಲಪಡಿಸಿ, ಏಳು ಕ್ಷೇತ್ರಗಳನ್ನ ಗೆಲ್ಲಲು ಬೇಕಾದ ತಂತ್ರಗಳನ್ನು ಅನುಸರಿಸಿ ಎಂದು ದೇವೇಗೌಡರು ಕರೆ ನೀಡಿದ್ದಾರೆ ಎನ್ನಲಾಗಿದೆ. ಪ್ರತೀ 10 ದಿನಕ್ಕೊಮ್ಮೆ ಮಂಡ್ಯದ ಸಂಪೂರ್ಣ ವರದಿ ನೀಡುವಂತೆ ಪ್ರತಿನಿಧಿಗಳಿಗೆ ತಿಳಿಸಿದ್ದು, ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವಂತೆ ಸಲಹೆ ನೀಡಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.