ಒಡಿಶಾದಲ್ಲಿ ಮತ್ತೊಂದು ರೈಲು ದುರಂತ: ಗೂಡ್ಸ್ ರೈಲು ಹರಿದು 7 ಕಾರ್ಮಿಕರು ದುರ್ಮರಣ | Azad Times

3 months ago 5
Google News-KN Google News-EN Telegram Facebook

Azad Times News Desk.

 ಗೂಡ್ಸ್ ರೈಲು ಹರಿದು 7 ಕಾರ್ಮಿಕರು ದುರ್ಮರಣ

ತ್ರಿವಳಿ ರೈಲು ದುರಂತದ ಬೆನ್ನಲ್ಲೇ ಮತ್ತೊಂದು ಒಡಿಶಾದಲ್ಲಿ ಮತ್ತೊಂದು ರೈಲು ದುರ್ಘಟನೆ ಸಂಭವಿಸಿದ್ದು, 7 ಕಾರ್ಮಿಕರು ಮೃತಪಟ್ಟು ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೈಪುರ್ ಕ್ಯೊಂಜಿಹರ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಜೈಪುರ್ ಕ್ಯೊಂಜಿಹರ್ ರೈಲ್ವೆ ನಿಲ್ದಾಣದ ಬಳಿ ಭಾರೀ ಮಳೆ ಹಿನ್ನೆಲೆಯಲ್ಲಿ ರೈಲಿನ ಕೆಳಗೆ ಆಶ್ರಯ ಪಡೆದಿದ್ದ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದಿದೆ.

ದಿಢೀರನೆ ಭಾರೀ ಮಳೆ ಗಾಳಿ ಬೀಸಿದ್ದರಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಿಂತಿದ್ದ ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಆದರೆ ಇದನ್ನು ಗಮನಿಸದ ರೈಲ್ವೆ ಚಾಲಕ ರೈಲು ಚಲಾಯಿಸಿದ್ದರಿಂದ ಮಲಗಿದ್ದವರ ಮೇಲೆ ರೈಲು ಹರಿದಿದೆ.

ರೈಲಿಗೆ ಇಂಜಿನ್ ಅಳವಡಿಸಿರಲಿಲ್ಲ. ಆದರೆ ರೈಲು ಗಾಳಿಯ ವೇಗಕ್ಕೆ ಚಲಿಸಿದ್ದರಿಂದ ದುರಂತ ಸಂಭವಿಸಿದೆ ಎಂದು ರೈಲ್ವೆ ಇಲಾಖೆ ವಕ್ತಾರರು ಘಟನೆಯನ್ನು ವಿವರಿಸಿದ್ದಾರೆ.

ಘಟನೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಕಳೆದ 5 ದಿನಗಳ ಹಿಂದೆ ಸಂಭವಿಸಿದ ರೈಲು ದುರಂತದಲ್ಲಿ 288 ಮಂದಿ ಮೃತಪಟ್ಟಿದ್ದು, 1000ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page