ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ | Azad Times

4 months ago 2
Google News-KN Google News-EN Telegram Facebook

Azad Times News Desk.

- Advertisement -

ಬೀದರ: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪರಸ್ಪರ ಕೂಗಾಟ-ತಳ್ಳಾಟದ ಘಟನೆ ನಡೆದಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಗ್ರಾಮೀಣ ಘಟಕದ ಅಧ್ಯಕ್ಷ ಆನಂದ ಚವಾಣ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಮತ್ತಿತರರು ಸಭೆ ನಡೆಸುತ್ತಿದ್ದರು. ಈ ವೇಳೆ ಕೆಲ ಕಾರ್ಯಕರ್ತರು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಡಾ. ಭೀಮಸೇನರಾವ ಸಿಂಧೆ ಅವರನ್ನು ಸಭೆಗೆ ಏಕೆ ಕರೆಸಿಲ್ಲ ಎಂದು ತಕರಾರು ತೆಗೆದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿದರು. ಕುರ್ಚಿಗಳನ್ನು ಎತ್ತಿ ಬಿಸಾಡಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಗಮನಿಸಿದ ಕೆಲ ನಾಯಕರು ಕೋಪೋದ್ರಿಕ್ತ ಕಾರ್ಯಕರ್ತರನ್ನು ಸಮಾಧಾನ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

- Advertisement -

‘ತಾಲ್ಲೂಕಿನ ಇಬ್ಬರು ಕಾಂಗ್ರೆಸ್ ಅಧ್ಯಕ್ಷರೇ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದಾರೆ. ಇವರಿಗೆ ಸಭೆ ನಡೆಸಲು ಯಾವುದೇ ನೈತಿಕತೆ ಇಲ್ಲ’ ಎಂದು ಈ ಸಂದರ್ಭದಲ್ಲಿ ಶರಣಪ್ಪ ಪಾಟೀಲ ದೂರಿದರು.

‘ನಾವು ಜಿಲ್ಲಾ ಅಧ್ಯಕ್ಷರ ಅನುಮತಿ ಪಡೆದು ಇಲ್ಲಿ ಸಭೆ ನಡೆಸುತ್ತಿದ್ದೇವೆ. ಆದರೆ ಶರಣಪ್ಪ ಪಾಟೀಲ ಕೆಲ ಯುವಕರನ್ನು ಕರೆ ತಂದು ಗದ್ದಲ ಎಬ್ಬಿಸಿ ಸಭೆಗೆ ಅಡ್ಡಿ ಮಾಡಿದ್ದಾರೆ. ಈ ಕುರಿತು ಅವರ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದೇವೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ ತಿಳಿಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page