Google News-KN | Google News-EN | Telegram |
ಮಣಿಪುರದಲ್ಲಿ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಗಲಭೆಯಲ್ಲಿ 98 ಮಂದಿ ಮೃತಪಟ್ಟಿದ್ದು, 310ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೈಥಿ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರ್ಪಡೆ ಖಂಡಿಸಿ ಮಾರ್ಚ್ 3ರಂದು 10 ಜಿಲ್ಲೆಗಳಲ್ಲಿ ಆದಿವಾಸಿ ಸಮುದಾಯಗಳು ಆರಂಭಿಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಒಂದು ತಿಂಗಳಾದರೂ ನಿಯಂತ್ರಣಕ್ಕೆ ಬಂದಿಲ್ಲ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂಸಾರೂಪ ತಾರಕಕ್ಕೇರಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಕೇಂದ್ರ ಸರಕಾರ ಈ ಗಲಭೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೇ ಕಡೆಗಣಿಸಿದ್ದರಿಂದ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಮಣಿಪುರದಲ್ಲಿ ಗಲಭೆ ಆರಂಭಗೊಂಡ ನಂತರ ಇಲ್ಲಿಯವರೆಗೆ ಸುಮಾರು 4000 ಪ್ರಕರಣಗಳು ದಾಖಲಾಗಿವೆ. ಮೈಥಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೇಥಿ ಸಮುದಾಯ ಈ ರಾಜ್ಯದಲ್ಲಿ ಶೇ.53ರಷ್ಟು ಜನಸಂಖ್ಯೆ ಹೊಂದಿದೆ. ನಾಗಾ ಮತ್ತು ಕುಕಿ ಸಮುದಾಯಗಳು ಕಣಿವೆ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದು, ಶೇ.40ರಷ್ಟು ಜನಸಂಖ್ಯೆ ಹೊಂದಿವೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.