Google News-KN | Google News-EN | Telegram |
ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತ ವಿರಾಟ್ ಕೊಹ್ಲಿ ಅರ್ಧಶತಕದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 21 ರನ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಘಾತ ಅನುಭವಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡುವ ನಿರ್ಧಾರ ಮಾಡಿದ ಆರ್ ಸಿಬಿ ತಂಡ ಚೇಸಿಂಗ್ ನಲ್ಲಿ ಮುಗ್ಗರಿಸಿತು.
ಕೆಕೆಆರ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 200 ರನ್ ಕಲೆ ಹಾಕಿತು. ಕಠಿಣ ಗುರಿ ಬೆಂಬತ್ತಿದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ಗೆ 179 ರನ್ ಗಳಿಸಲಷ್ಟೇ ಶಕ್ತವಾಯಿತು.
ಆರ್ ಸಿಬಿಗೆ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಮೊದಲ ವಿಕೆಟ್ ಗೆ 31 ರನ್ ಜೊತೆಯಾಟದಿಂದ ಸಾಧಾರಣ ಆರಂಭ ನೀಡಿದರು. ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 6 ಬೌಂಡರಿ ಸೇರಿದ 54 ರನ್ ಸಿಡಿಸಿದರೆ, ಫಾಫ್ 7 ಎಸೆತಗಳಲ್ಲಿ 1 ಬೌಂಡರಿ ಮತ್ತು 12 ಸಿಕ್ಸರ್ ಸೇರಿದ17 ರನ್ ಬಾರಿಸಿ ಔಟಾದರು.
ಮಧ್ಯಮ ಕ್ರಮಾಂಕದಲ್ಲಿ ಶಹಬಾಜ್ ಅಹ್ಮದ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ವಿಫಲರಾದರು. ಈ ಹಂತದಲ್ಲಿ ಮಹಿಪಾಲ್ ಲೊಮ್ರೊರ್ 18 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 34 ರನ್ ಮತ್ತು ದಿನೇಶ್ ಕಾರ್ತಿಕ್ 18 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 22 ರನ್ ಬಾರಿಸಿದರು.
ಕೆಕೆಆರ್ ಪರ ವರುಣ್ ಚಕ್ರವರ್ತಿ 3, ಸುಯೆಶ್ ಶರ್ಮ ಮತ್ತು ಆಂಡ್ರೆ ರಸೆಲ್ ತಲಾ 2 ವಿಕೆಟ್ ಪಡೆದು ಆರ್ ಸಿಬಿ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಕೆಕೆಆರ್ ತಂಡದ ಪರ ಜೇಸನ್ ರಾಯ್ ಮತ್ತು ನಾರಾಯಣ್ ಜಗದೀಶನ್ ಮೊದಲ ವಿಕೆಟ್ ಗೆ 83 ರನ್ ಜೊತೆಯಾಟ ನಿಭಾಯಿಸಿ ಉತ್ತಮ ಆರಂಭ ನೀಡಿದರು.
ಜೇಸನ್ ರಾಯ್ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 56 ರನ್ ಬಾರಿಸಿ ಔಟಾದರೆ, ಜಗದೀಶನ್ 27 ರನ್ ಬಾರಿಸಿದರು. ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ (31) ಮತ್ತು ನಾಯಕ ನಿತಿಶ್ ರಾಣಾ 21 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 48 ರನ್ ಸಿಡಿಸಿದರು. ಈ ಮೂಲಕ ತಂಡ 200ರ ಗಡಿ ತಲುಪಿಸಿದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.