Google News-KN | Google News-EN | Telegram |
ಶಿಕ್ಷಣ ಸಚಿವ B.C. ನಾಗೇಶ್ ತವರೂರು ತುಮಕೂರಿನಲ್ಲಿ ವಿದ್ಯಾರ್ಥಿನಿಯರಿಗೆ ರಕ್ಷಣೆಯಿಲ್ಲದಂತಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಬೋರನಗುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನೊಬ್ಬ 4 ಮತ್ತು 5ನೇ ತರಗತಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಸರ್ಕಾರಿ ಶಾಲೆಯಲ್ಲಿ ಶಿಕ್ಷಕ ಮಂಜುನಾಥ ಎಂಬಾತನ ಮೇಲೆ ಅಸಭ್ಯ ವರ್ತಿನೆಯ ಆರೋಪ ಕೇಳಿ ಬಂದಿದೆ.. ಕಾಮುಕ ಶಿಕ್ಷಕನಿಂದ ಬೆಸತ್ತ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದು, ರೊಚ್ಚಿಗೆದ್ದ ಪೋಷಕರು ಶಿಕ್ಷಕ ಮಂಜುನಾಥ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಸ್ಥಳಕ್ಕೆ ಮಧುಗಿರಿ BEO ತಿಮ್ಮರಾಜು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಕರ್ತವ್ಯ ಲೋಪದ ಆಧಾರದ ಮೇಲೆ ಶಿಕ್ಷಕ ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕ ನಟರಾಜ್ನನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಶಿಕ್ಷಕ ಮಂಜುನಾಥ್ನನ್ನು ಬಡವನಹಳ್ಳಿ ಪೊಲೀಸರು ಪೋಕ್ಸೊ ಪ್ರಕರಣದಡಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.