Google News-KN | Google News-EN | Telegram |
ವರುಣಾ ಕ್ಷೇತ್ರ ಬೇಡ, ಕೋಲಾರದಿಂದ ಸ್ಪರ್ಧಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ನಿ ಪಾರ್ವತಿ ಸಲಹೆ ನೀಡಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮುನ್ನ ಆಲೋಚಿಸಿ, ಅಪಾಯ ಇದ್ದರೆ ಬೇಡ ಎಂದು ಹೈಕಮಾಂಡ್ ಸಲಹೆ ನೀಡಿದ್ದರಿಂದ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಗೊಂದಲ ಏರ್ಪಟ್ಟಿದೆ.
ಕೋಲಾರದಿಂದ ಸ್ಪರ್ಧಿಸುವಂತೆ ಕೋಲಾರದ ಅಭಿಮಾನಿಗಳು ಒತ್ತಡ ಹೇರಿದ್ದರಿಂದ ಕುಟುಂಬದ ಜೊತೆ ಚರ್ಚಿಸಿ ತೀರ್ಮಾನ ಪ್ರಕಟಿಸುತ್ತೇನೆ. ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸಬೇಡಿ ಎಂದು ಹೇಳಿಲ್ಲ ಎಂದು ಸಮಜಾಯಿಷಿ ನೀಡಿದ್ದರು.
ಇದೀಗ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಕುಟುಂಬದಲ್ಲೂ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಪತ್ನಿ ಪಾರ್ವತಿ ಕೋಲಾರದಿಂದ ಸ್ಪರ್ಧಿಸಿ ಎಂದು ಸಲಹೆ ನೀಡಿದ್ದರೆ, ಪುತ್ರ ಯತೀಂದ್ರ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ.
ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದರೆ ಕ್ಷೇತ್ರ ಬಿಟ್ಟುಕೊಡಲು ನಾನು ಸಿದ್ಧ. ನನಗೆ ವಯಸ್ಸಿರುವುದರಿಂದ ಮುಂದೆ ನನಗೆ ಅವಕಾಶಗಳು ಇದೆ ಎಂದು ಯತೀಂದ್ರ ಹೇಳಿದ್ದಾರೆ.
ಆದರೆ ಪತ್ನಿ ಪಾರ್ವತಿ ವರುಣಾ ಬದಲು ಕೋಲಾರದಿಂದ ಸ್ಪರ್ಧಿಸಲು ಸಲಹೆ ನೀಡಿದ್ದಾರೆ. ಈ ಹಿಂದೆ ಕೂಡ ರಾಕೇಶ್ ಇಲ್ಲದ ಕಾರಣ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಡಿ ಎಂದು ಪತ್ನಿ ಸಲಹೆ ನೀಡಿದ್ದರೂ ಅದನ್ನು ತಿರಸ್ಕರಿಸಿ ಕಣಕ್ಕಿಳಿದಿದ್ದ ಸಿದ್ದರಾಮಯ್ಯ ಸೋಲುಂಡಿದ್ದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.